ಸೋಮವಾರ, ಮೇ 28, 2018

ಜೇಡರ ದಾಸಿಮಯ್ಯ ನವರ ವಚನ ಸಾಹಿತ್ಯ

ದೇವರ/ಜೇಡರ ದಾಸಿಮಯ್ಯ

ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ  ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ. ಸುರಪುರ ತಾಲೂಕಿನ ಮುದನೂರು ಗ್ರಾಮದವನಾದ ನೇಕಾರ ದಾಸಿಮಯ್ಯ ತನ್ನ ಸತಿ ದುಗ್ಗಲೆಯೊಂದಿಗೆ ಕಾಯಕವನ್ನೇ ಕೈಲಾಸವಾಗಿಸಿಕೊಡ ಸಾಧಕ.[೧]

ದೇವರ/ಜೇಡರ ದಾಸಿಮಯ್ಯ
ಜನನ
೧೧೬೫
ಮುದನೂರು, ಸುರಪುರ ತಾಲ್ಲೋಕು, ಯಾದಗಿರಿ ಜಿಲ್ಲೆ
ಅಂಕಿತನಾಮ
ರಾಮನಾಥ
ಇದಕ್ಕೆ ಪ್ರಸಿದ್ಧ
ವಚನಕಾರ
ಸಂಗಾತಿ(ಗಳು)
ದುಗ್ಗಳೆ
ಜನನಸಂಪಾದಿಸಿ

ದಾಸಿಮಯ್ಯನವರು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಗ್ರಾಮದಲ್ಲಿ ಕಾಮಯ್ಯ -ಶಂಕರಿ ದಂಪತಿಯ ಪುತ್ರನಾಗಿ, ಚೈತ್ರ ಶುದ್ಧ ಪಂಚಮಿಯಂದು ನೇಕಾರ ಕುಟುಂಬದಲ್ಲಿ ಜನಿಸಿದರು.[೨]

ಶಿಕ್ಷಣಸಂಪಾದಿಸಿ

ದೇವರ ದಾಸಿಮಯ್ಯ ಮುದನೂರಿನ ಸಮೀಪದಲ್ಲಿರುವ ಶೈವ ಕೇಂದ್ರವಾದ ಶ್ರೀಶೈಲದಲ್ಲಿ ಶ್ರೀ ಚಂದ್ರಗುಂಡ ಶಿವಾಚಾರ್ಯರ ಗುರುಕುಲದಲ್ಲಿ ಅಪಾರ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರವನ್ನು ಕೂಡಾ ಪಡೆದು ಜ್ಞಾನವಂತನಾದನು. ದಾಸಿಮಯ್ಯ ಯಾವುದನ್ನೂ ಪ್ರಶ್ನಿಸದೆ ಸ್ವೀಕರಿಸುವ ಮನೋಭಾವದವನಲ್ಲ. ಪ್ರಖರ ವೈಚಾರಿಕ ನೆಲೆಗಟ್ಟಿನ ಅಸದೃಶ ವ್ಯಕ್ತಿತ್ವವನ್ನು ಹೊಂದಿದವನಾಗಿದ್ದನು.

ವಿವಾಹಸಂಪಾದಿಸಿ

ದಾಸಿಮಯ್ಯನು ದುಗ್ಗಳೆಯನ್ನು ವಿವಾಹವಾದನು. ದುಗ್ಗಳೆಯನ್ನು ಕುರಿತು ಆತ ರಚಿಸಿದ ವಚನ ಇಂತಿದೆ:
ಬಂದುದನರಿದು ಬಳಸುವಳು ಬಂದುದ ಪರಿಣಾಮಿಸುವಳು ಬಂಧು ಬಳಗವ ಮರೆಸುವಳು ದುಗ್ಗಳೆಯ ತಂದು ಬದುಕಿದೆನು ಕಾಣಾ ರಾಮನಾಥ

ವಚನ ರಚನೆಸಂಪಾದಿಸಿ

ರಾಮನಾಥ ಎಂಬ ಅಂಕಿತದಲ್ಲಿ ಬರೆಯಲಾದ ಈತನ ಸುಮಾರು ೧೫೦ ವಚನಗಳು ದೊರೆತಿವೆಯೆನ್ನಲಾಗಿದೆ.[೩]

1

ಮೊಲೆ ಮೂಡಿ ಬಂದರೆ ಹೆಣ್ಣೆಂಬರು

ಗಡ್ಡ ಮೀಸೆ ಬಂದರೆ ಗಂಡೆಂಬರು

ನಡುವೆ ಸುಳಿಯುವಾತ್ಮನು

ಹೆಣ್ಣೂ ಅಲ್ಲ, ಗಂಡೂ ಅಲ್ಲ ರಾಮನಾಥ

2

ಒಡಲುಗೊಂಡವ ಹಸಿವ
ಒಡಲುಗೊಂಡವ ಹುಸಿವ

ಒಡಲುಗೊಂಡವನೆಂದು ನೀನೊಮ್ಮೆ ಜರಿದು ನುಡಿಯದಿರು

ನೀನೆನ್ನಂತೊಮ್ಮೆ ಒಡಲುಗೊಂಡು ನೋಡಾ ರಾಮನಾಥ

3

ಇಳೆ ನಿಮ್ಮ ದಾನ ಬೆಳೆ ನಿಮ್ಮ ದಾನ

ಸುಳಿದು ಬೀಸುವ ಗಾಳಿ ಅದು ನಿಮ್ಮ ದಾನ

ನಿಮ್ಮ ದಾನವನುಂಡು ಅನ್ಯರ ಹೊಗಳುವ

ಕುನ್ನಿಗಳನೇನೆಂಬೆ ರಾಮನಾಥ

4
ಕಡೆಗೀಲಿಲ್ಲದ ಬಂಡಿ ಹೊಡೆಗೆಡೆಯದೆ ಮಾಣ್ಬುದೆ?

ಕಡೆಗೀಲು ಬಂಡಿಗಾಧಾರ

ಈ ಕಡುದರ್ಪವೇರಿದ ಒಡಲೆಂಬ ಬಂಡಿಗೆ

ಮೃಢಭಕ್ತರ ನುಡಿಗಡಣವೆ ಕಡೆಗೀಲು ಕಾಣಾ! ರಾಮನಾಥ.

5
ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ

ಸತಿಪತಿಗಳೊಂದಾಗದವನ ಭಕ್ತಿ

ಅಮೃತದೊಳು ವಿಷ ಬೆರೆದಂತೆ ಕಾಣಾ! ರಾಮನಾಥ.

6

ಬಂದುದನರಿದು ಬಳಸುವಳು
ಬಂದುದ ಪರಿಣಾಮಿಸುವಳು
ಬಂಧು ಬಳಗವ ಮರೆಸುವಳು
ದುಗ್ಗಳೆಯ ತಂದು ಬದುಕಿದೆನು ಕಾಣಾ ರಾಮನಾಥ
7
ಹರ ತನ್ನ ಭಕ್ತರ ತಿರಿವಂತೆ ಮಾಡುವ

ಒರೆದು ನೋಡುವ ಸುವರ್ಣದ ಚಿನ್ನದಂತೆ

ಅರೆದು ನೋಡುವ ಚಂದನದಂತೆ

ಅರಿದು ನೋಡುವ ಕಬ್ಬಿನ ಕೋಲಿನಂತೆ

ಬೆದರದೆ ಬೆಚ್ಚದೆ ಇದ್ದಡೆ

ಕರವಿಡಿದೆತ್ತಿಕೊಂಬ ನಮ್ಮ ರಾಮನಾಥನು

ಎಂದು ಸಾರುವಲ್ಲಿ ತೋರಿದ ಜನಪರ ಕಾಳಜಿ ಇಂದಿಗೂ ಆನ್ವಯಿಕ. ಶಿವ ಜಗತ್ತನ್ನೇ ವ್ಯಾಪಿಸಿಕೊಂಡಂತೆ, ಜಗತ್ತೇ ಶಿವನ ರೂಪ ಎಂಬ ನಿಲುವಿನೊಂದಿಗೆ, "ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನವಯ್ಯ. ಎಂದೆನ್ನುವ ದಾಸಿಮಯ್ಯನಲ್ಲಿ ಈ ಲೋಕವನ್ನು ನೋಡುವ ಕ್ರಮ ಹೊಸತನದಿಂದ ಕೂಡಿದೆ.

ಉಲ್ಲೇಖಗಳುಸಂಪಾದಿಸಿ

1 ↑ http://lingayatreligion.com/K/Sharanaru/JedaraDaasimayya.htm

2 ↑ http://devaradasimayya.blogspot.in/2010/12/blog-post.html#.WZW1wVEjHIU

3 ↑ http://lingayatreligion.com/K/VachanaSahitya/JedaraDasimayyaVachana.htm
Last edited ೨ months ago by an anonymous user

RELATED PAGES
ಸಂಸ್ಕಾರ
ಒಂದು ಶುದ್ಧೀಕರಣ ಸಮಾರಂಭ
ಜೇಡರ ದಾಸಿಮಯ್ಯ (ಕ್ರಿ.ಶ. ಸು. ೧೧೪೦)

ದೇವರ/ಜೇಡರ ದಾಸಿಮಯ್ಯ

ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ  ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ. ಸುರಪುರ ತಾಲೂಕಿನ ಮುದನೂರು ಗ್ರಾಮದವನಾದ ನೇಕಾರ ದಾಸಿಮಯ್ಯ ತನ್ನ ಸತಿ ದುಗ್ಗಲೆಯೊಂದಿಗೆ ಕಾಯಕವನ್ನೇ ಕೈಲಾಸವಾಗಿಸಿಕೊಡ ಸಾಧಕ.[೧]

ದೇವರ/ಜೇಡರ ದಾಸಿಮಯ್ಯ
ಜನನ
೧೧೬೫
ಮುದನೂರು, ಸುರಪುರ ತಾಲ್ಲೋಕು, ಯಾದಗಿರಿ ಜಿಲ್ಲೆ
ಅಂಕಿತನಾಮ
ರಾಮನಾಥ
ಇದಕ್ಕೆ ಪ್ರಸಿದ್ಧ
ವಚನಕಾರ
ಸಂಗಾತಿ(ಗಳು)
ದುಗ್ಗಳೆ
ಜನನಸಂಪಾದಿಸಿ

ದಾಸಿಮಯ್ಯನವರು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಗ್ರಾಮದಲ್ಲಿ ಕಾಮಯ್ಯ -ಶಂಕರಿ ದಂಪತಿಯ ಪುತ್ರನಾಗಿ, ಚೈತ್ರ ಶುದ್ಧ ಪಂಚಮಿಯಂದು ನೇಕಾರ ಕುಟುಂಬದಲ್ಲಿ ಜನಿಸಿದರು.[೨]

ಶಿಕ್ಷಣಸಂಪಾದಿಸಿ

ದೇವರ ದಾಸಿಮಯ್ಯ ಮುದನೂರಿನ ಸಮೀಪದಲ್ಲಿರುವ ಶೈವ ಕೇಂದ್ರವಾದ ಶ್ರೀಶೈಲದಲ್ಲಿ ಶ್ರೀ ಚಂದ್ರಗುಂಡ ಶಿವಾಚಾರ್ಯರ ಗುರುಕುಲದಲ್ಲಿ ಅಪಾರ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರವನ್ನು ಕೂಡಾ ಪಡೆದು ಜ್ಞಾನವಂತನಾದನು. ದಾಸಿಮಯ್ಯ ಯಾವುದನ್ನೂ ಪ್ರಶ್ನಿಸದೆ ಸ್ವೀಕರಿಸುವ ಮನೋಭಾವದವನಲ್ಲ. ಪ್ರಖರ ವೈಚಾರಿಕ ನೆಲೆಗಟ್ಟಿನ ಅಸದೃಶ ವ್ಯಕ್ತಿತ್ವವನ್ನು ಹೊಂದಿದವನಾಗಿದ್ದನು.

ವಿವಾಹಸಂಪಾದಿಸಿ

ದಾಸಿಮಯ್ಯನು ದುಗ್ಗಳೆಯನ್ನು ವಿವಾಹವಾದನು. ದುಗ್ಗಳೆಯನ್ನು ಕುರಿತು ಆತ ರಚಿಸಿದ ವಚನ ಇಂತಿದೆ:
ಬಂದುದನರಿದು ಬಳಸುವಳು ಬಂದುದ ಪರಿಣಾಮಿಸುವಳು ಬಂಧು ಬಳಗವ ಮರೆಸುವಳು ದುಗ್ಗಳೆಯ ತಂದು ಬದುಕಿದೆನು ಕಾಣಾ ರಾಮನಾಥ

ವಚನ ರಚನೆಸಂಪಾದಿಸಿ

ರಾಮನಾಥ ಎಂಬ ಅಂಕಿತದಲ್ಲಿ ಬರೆಯಲಾದ ಈತನ ಸುಮಾರು ೧೫೦ ವಚನಗಳು ದೊರೆತಿವೆಯೆನ್ನಲಾಗಿದೆ.[೩]

1

ಮೊಲೆ ಮೂಡಿ ಬಂದರೆ ಹೆಣ್ಣೆಂಬರು

ಗಡ್ಡ ಮೀಸೆ ಬಂದರೆ ಗಂಡೆಂಬರು

ನಡುವೆ ಸುಳಿಯುವಾತ್ಮನು

ಹೆಣ್ಣೂ ಅಲ್ಲ, ಗಂಡೂ ಅಲ್ಲ ರಾಮನಾಥ

2

ಒಡಲುಗೊಂಡವ ಹಸಿವ
ಒಡಲುಗೊಂಡವ ಹುಸಿವ

ಒಡಲುಗೊಂಡವನೆಂದು ನೀನೊಮ್ಮೆ ಜರಿದು ನುಡಿಯದಿರು

ನೀನೆನ್ನಂತೊಮ್ಮೆ ಒಡಲುಗೊಂಡು ನೋಡಾ ರಾಮನಾಥ

3

ಇಳೆ ನಿಮ್ಮ ದಾನ ಬೆಳೆ ನಿಮ್ಮ ದಾನ

ಸುಳಿದು ಬೀಸುವ ಗಾಳಿ ಅದು ನಿಮ್ಮ ದಾನ

ನಿಮ್ಮ ದಾನವನುಂಡು ಅನ್ಯರ ಹೊಗಳುವ

ಕುನ್ನಿಗಳನೇನೆಂಬೆ ರಾಮನಾಥ

4
ಕಡೆಗೀಲಿಲ್ಲದ ಬಂಡಿ ಹೊಡೆಗೆಡೆಯದೆ ಮಾಣ್ಬುದೆ?

ಕಡೆಗೀಲು ಬಂಡಿಗಾಧಾರ

ಈ ಕಡುದರ್ಪವೇರಿದ ಒಡಲೆಂಬ ಬಂಡಿಗೆ

ಮೃಢಭಕ್ತರ ನುಡಿಗಡಣವೆ ಕಡೆಗೀಲು ಕಾಣಾ! ರಾಮನಾಥ.

5
ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ

ಸತಿಪತಿಗಳೊಂದಾಗದವನ ಭಕ್ತಿ

ಅಮೃತದೊಳು ವಿಷ ಬೆರೆದಂತೆ ಕಾಣಾ! ರಾಮನಾಥ.

6

ಬಂದುದನರಿದು ಬಳಸುವಳು
ಬಂದುದ ಪರಿಣಾಮಿಸುವಳು
ಬಂಧು ಬಳಗವ ಮರೆಸುವಳು
ದುಗ್ಗಳೆಯ ತಂದು ಬದುಕಿದೆನು ಕಾಣಾ ರಾಮನಾಥ
7
ಹರ ತನ್ನ ಭಕ್ತರ ತಿರಿವಂತೆ ಮಾಡುವ

ಒರೆದು ನೋಡುವ ಸುವರ್ಣದ ಚಿನ್ನದಂತೆ

ಅರೆದು ನೋಡುವ ಚಂದನದಂತೆ

ಅರಿದು ನೋಡುವ ಕಬ್ಬಿನ ಕೋಲಿನಂತೆ

ಬೆದರದೆ ಬೆಚ್ಚದೆ ಇದ್ದಡೆ

ಕರವಿಡಿದೆತ್ತಿಕೊಂಬ ನಮ್ಮ ರಾಮನಾಥನು

ಎಂದು ಸಾರುವಲ್ಲಿ ತೋರಿದ ಜನಪರ ಕಾಳಜಿ ಇಂದಿಗೂ ಆನ್ವಯಿಕ. ಶಿವ ಜಗತ್ತನ್ನೇ ವ್ಯಾಪಿಸಿಕೊಂಡಂತೆ, ಜಗತ್ತೇ ಶಿವನ ರೂಪ ಎಂಬ ನಿಲುವಿನೊಂದಿಗೆ, "ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನವಯ್ಯ. ಎಂದೆನ್ನುವ ದಾಸಿಮಯ್ಯನಲ್ಲಿ ಈ ಲೋಕವನ್ನು ನೋಡುವ ಕ್ರಮ ಹೊಸತನದಿಂದ ಕೂಡಿದೆ.

ಉಲ್ಲೇಖಗಳುಸಂಪಾದಿಸಿ

↑ http://lingayatreligion.com/K/Sharanaru/JedaraDaasimayya.htm
↑ http://devaradasimayya.blogspot.in/2010/12/blog-post.html#.WZW1wVEjHIU
↑ http://lingayatreligion.com/K/VachanaSahitya/JedaraDasimayyaVachana.htm
Last edited ೨ months ago by an anonymous user
RELATED PAGES
ಸಂಸ್ಕಾರ
ಒಂದು ಶುದ್ಧೀಕರಣ ಸಮಾರಂಭ
ಜೇಡರ ದಾಸಿಮಯ್ಯ (ಕ್ರಿ.ಶ. ಸು. ೧೧೪೦)
ಕನ್ನಡದಲ್ಲಿ ವಚನ ಸಾಹಿತ್ಯ

                 ಇಂತಿ                                                         ಮಂಜುನಾಥಕ ಕೆ ಎಂ                                                  ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು         
     ಬಸವಪಟ್ಟಣ ಚಿರಡೋಣಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ