ಭಾನುವಾರ, ಮೇ 27, 2018

ಬಿ ಎಂ ಶ್ರೀ ಯವರ ಜೀವನ ಮತ್ತು ಸಾಹಿತ್ಯ ಪರಿಚಯ


ಹುಡುಕು

ಸಂಪಾದಿಸಿಈ ಪುಟವನ್ನು ವೀಕ್ಷಿಸಿಇನ್ನೊಂದು ಭಾಷೆಯಲ್ಲಿ ಓದು

ಬಿ.ಎಂ.ಶ್ರೀಕಂಠಯ್ಯ

ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ (ಜನವರಿ ೩೧೮೮೪ - ಜನವರಿ ೫೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ಕವಿ ಮತ್ತು ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು. ಕನ್ನಡಕ್ಕೆ ಯಾವುದೇ ಉನ್ನತ ಸ್ಥಾನ-ಮಾನಗಳಿರಲಿಲ್ಲ. ಅಂತಹ ಸಮಯದಲ್ಲಿ ಕನ್ನಡವನ್ನು ಅದಕ್ಕಿರುವ ಒಂದು ನ್ಯಾಯವಾದ ಸ್ಥಾನವನ್ನು ದೊರಕಿಸಿ ಕೊಡಲೇಬೇಕು ಎಂದು ಆಶಿಸಿ, ತಮ್ಮ ಜೀವನವನ್ನು ಕನ್ನಡಕ್ಕಾಗಿ ಮುಡಿಪಾಗಿಟ್ಟವರು ಬಿ. ಎಂ. ಶ್ರೀಕಂಠಯ್ಯನವರು.ಧಾರವಾಡದಲ್ಲಿ ೧೯೧೧ ರಲ್ಲಿ ಶ್ರೀ ಯವರು "ಕನ್ನಡ ಮಾತು ತಲೆಯೆತ್ತುವ ಬಗೆ" ಭಾಷಣ ಮಾಡಿದರು.

ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ
© Kamat's Potpourriಜನನ:ಜನವರಿ ೩೧೮೮೪
ಜನನ ಸ್ಥಳ:ಬೆಳ್ಳೂರು, ನಾಗಮಂಗಲ ,ಮಂಡ್ಯ ಜಿಲ್ಲೆ, ಕರ್ನಾಟಕನಿಧನ:ಜನವರಿ ೫೧೯೪೬
ಬೆಂಗಳೂರು, ಕರ್ನಾಟಕವೃತ್ತಿ:ಕವಿ, ಸಾಹಿತಿ, ನಾಟಕಕಾರರಾಷ್ಟ್ರೀಯತೆ:ಭಾರತೀಯಸಾಹಿತ್ಯದ ವಿಧ(ಗಳು):ಕಾಲ್ಪನಿಕಸಾಹಿತ್ಯ ಶೈಲಿ:ನವೋದಯ ಸಾಹಿತ್ಯ

ಜನನ, ಬಾಲ್ಯ ಹಾಗೂ ವಿದ್ಯಾಭ್ಯಾಸಸಂಪಾದಿಸಿ

ಬಿ.ಎಂ.ಶ್ರೀಯವರು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಸಂಪಿಗೆ ಎಂಬ ಹಳ್ಳಿಯಲ್ಲಿ ೧೮೮೪ರ ಜನವರಿ ೩ ರಲ್ಲಿ ಜನಿಸಿದರು. ಅವರ ತಂದೆ ಮೈಲಾರಯ್ಯನವರು, ತಾಯಿಭಾಗೀರಥಮ್ಮ ಇವರ ಮುದ್ದಿನ ಮಗನಾಗಿ ಬಿ.ಎಂ. ಶ್ರೀಯವರು ಬೆಳೆದರು. ಶ್ರೀಕಂಠಯ್ಯನವರು ತಮ್ಮ ಬಾಲ್ಯದ ಶಿಕ್ಷಣವನ್ನು ಬೆಳ್ಳೂರಿನಲ್ಲಿ ಕಲಿತರು. ೧೯೦೬ರಲ್ಲಿ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ ಪದವಿ, ೧೯೦೭ರಲ್ಲಿ ಮದರಾಸು ವಿವಿಯಲ್ಲಿ ಬಿ.ಎಲ್. ಪದವಿ, ೧೯೦೯ರಲ್ಲಿ ಎಂ.ಎ. ಪದವಿ ಪಡೆದರು. ಅದೇ ವರ್ಷ ಮೈಸೂರು ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ೧೯೩೦ರಲ್ಲಿ ಪ್ರಾಧ್ಯಾಪಕರಾಗಿದ್ದ ಅವರು, ೧೯೨೬-೧೯೩೦ ರವರೆಗೆ ನಾಲ್ಕು ವರ್ಷಗಳ ಕಾಲ ಕುಲಸಚಿವರಾಗಿದ್ದರು. ೧೯೩೮-೧೯೪೨ ರವರೆಗೆ ಕನ್ನಡ ಸಾಹಿತ್ಯ ಪರಿಷತ್ ನ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ವೃತ್ತಿ ಜೀವನಸಂಪಾದಿಸಿ

maharaja college, Mysore

central college, Banglore

ಆಗಲೇ ಮೈಸೂರಿನ ಮಹಾರಾಜ ಕಾಲೇಜಿನಲ್ಲಿಅಧ್ಯಾಪಕರಾಗಿ ಸೇರಿಕೊಂಡರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ೨೫ ವರ್ಷ ಸೇವೆ ಸಲ್ಲಿಸಿ ೧೯೩೦ರಲ್ಲಿ ಬೆಂಗಳೂರಿನ ಸೆಂಟ್ರಲ್ ಕಾಲೇಜ್ ಗೆ ವರ್ಗವಾದರು.ಅನಂತರ ಅವರು ೧೯೪೨ರ ವರೆಗೆ ಈ ಕಾಲೇಜಿನ ಏಳಿಗೆಗಾಗಿ ದುಡಿದು ೧೯೪೪ರಲ್ಲಿ 'ಧಾರವಾಡದ ಕೆ.ಇ.ಬೋರ್ಡ್‌'ನ ಮುಖ್ಯಸ್ಥರಾಗಿ ನೇಮಕಗೊಂಡು ಅವರ 'ಆರ್ಟ್ಸ್ ಕಾಲೇಜ್' ಗೆ 'ಪ್ರಾಂಶುಪಾಲಕ'ರಾಗಿ ಕೊನೆಯವರೆಗೆ ಅಲ್ಲಿಯೇ ಕೆಲಸ ಮಾಡಿದರು. 'ಬಿ.ಎಂ.ಶ್ರೀಕಂಠಯ್ಯನವರು' ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗಾಗಿ ಅವಿಶ್ರಾಂತವಾಗಿ ದುಡಿದರು. ಹಾಗೂ ಅವರ ಪ್ರೀತಿಯ ವಿದ್ಯಾರ್ಥಿಗಳಾದ 'ಮಾಸ್ತಿ', 'ಕುವೆಂಪು', 'ಎಸ್.ವಿ.ರಂಗಣ್ಣ', 'ತೀ.ನಂ. ಶ್ರೀಕಂಠಯ್ಯ', 'ಜಿ.ಪಿ.ರಾಜರತ್ನಂ', 'ಡಿ.ಎಲ್. 'ನರಸಿಂಹಚಾರ್' ಮುಂತಾದವರಿಗೆ ಕನ್ನಡದಲ್ಲಿ ಸಾಹಿತ್ಯ ರಚನೆ ಮಾಡಲು ಪ್ರೋತ್ಸಾಹಿದರು. ಅವರು ಕನ್ನಡದಲ್ಲಿ ಕೆಲವು ಉತ್ತಮ ನಾಟಕಗಳನ್ನು ಬರೆದರು.

೧ ಗದಾಯುದ್ಧ,೨ ಅಶ್ವತ್ಥಾಮನ್ ೩ ಪಾರಸಿಕರು

ಇಂಗ್ಲೀಷ್ ಗೀತೆಗಳ ಅನುವಾದದ ರಚನೆಗಳುಸಂಪಾದಿಸಿ

ಅಶ್ವತ್ಥಾಮನ್:- ನಮ್ಮ ದೇಶದಲ್ಲಿ ಪುರಾಣ ಪ್ರಸಿದ್ಧವಾದ ಅನೇಕ ಕಥೆಗಳಿವೆಯಲ್ಲವೇ? ಹಾಗೆಯೇ ಗ್ರೀಸ್ ದೇಶದಲ್ಲೂ ಪುರಾಣ ಪ್ರಸಿದ್ಧ ಕಥೆಗಳಿವೆ. ಗ್ರೀಸ್ ದೇಶದ ಅನೇಕ ನಾಟಕಗಳ ಕಥೆ ಪುರಾಣ ಪುರುಷರನ್ನು ಕುರಿತದ್ದು. ಅಂಥ ನಾಟಕಗಳಲ್ಲಿ ’ಏಜಾಕ್ಸ್’ ಎಂಬುದು ಒಂದು ಪ್ರಸಿದ್ಧ ನಾಟಕ. ಆ ನಾಟಕವನ್ನು ಬರೆದವನು ಸಾಫೋಕ್ಲೀಸ್; ಗ್ರೀಸ್ ದೇಶದ ಮಹಾ ನಾಟಕಕಾರರಲ್ಲಿ ಒಬ್ಬ. ಸುಮಾರು ೨,೪೦೦ ವರ್ಷಗಳ ಹಿಂದೆ ಇದ್ದ. ನಮ್ಮ ಮಹಾಭಾರತದಲ್ಲಿ ಬರುವ ಅನೇಕ ಸಂದರ್ಭಗಳು, ಘಟನೆಗಳು ಆ ನಾಟಕದಲ್ಲೂ ಬರುತ್ತವೆ. ಆ ನಾಟಕವನ್ನು ಓದಿ ಮೆಚ್ಚಿಕೊಂಡಿದ್ದ ’ಶ್ರೀ’ ಅವರು, ಅದನ್ನು ಆಧರಿಸಿಕೊಂಡು ’ಅಶ್ವತ್ಥಾಮನ್’ ನಾಟಕವನ್ನು ರಚಿಸಿದರು. ಮಹಾಭಾರತದ ಪ್ರಸಿದ್ಧ ವ್ಯಕ್ತಿಗಳಲ್ಲಿ ಅಶ್ವತ್ಥಾಮ ಒಬ್ಬ. ಈತನನ್ನು ಕುರಿತದ್ದು ಈ ನಾಟಕದ ಕಥೆ. ಅಶ್ವತ್ಥಾಮ ಪರಾಕ್ರಮಿ ಮತ್ತು ಪ್ರಾಮಾಣಿಕ. ಮಹಾಭಾರತದ ಯುದ್ಧದಲ್ಲಿ ತನ್ನ ನಾಯಕ ದುರ್ಯೋಧನನ ಮರಣದಿಂದ ಪಾಂಡವರ ಮೇಲೆ ಈತನಿಗೆ ಬಹಳ ಕೋಪವುಂಟಾಗುತ್ತದೆ. ಆ ಕೋಪದಲ್ಲಿಯೇ ಅರ್ಧರಾತ್ರಿ ಸಮಯದಲ್ಲಿ ಪಾಂಡವರ ಪಾಳಯಕ್ಕೆ ನುಗ್ಗಿ, ನಿದ್ರೆಯಲ್ಲಿದ್ದ ಅನೇಕ ಪಶುಗಳು, ಮಕ್ಕಳು ಮತ್ತು ಹೆಂಗಸರನ್ನೂ ಕೊಂದು, ತನ್ನ ಮನೆಗೆ ಹೋಗುತ್ತಾನೆ. ಅನಂತರ ನಿದ್ರೆಯಲ್ಲಿದ್ದ ಪ್ರಾಣಿಗಳನ್ನು, ಮಕ್ಕಳನ್ನು, ಹೆಂಗಸರನ್ನು ತನ್ನಂಥ ವೀರ ಕೊಂದದ್ದು ಹೇಡಿತನ ಎನಿಸುತ್ತದೆ. ಇದೊಂದು ಪಾಪದ ಕೆಲಸ ಎಂದೂ ತಿಳಿಯುತ್ತಾನೆ. ಇದರಿಂದ ಅಶ್ವತ್ಥಾಮ ಬಹಳ ಪಶ್ಚಾತ್ತಾಪ ಪಡುತ್ತಾನೆ. ಕೊನೆಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಹೀಗಾಗಿ ’ಅಶ್ವತ್ಥಾಮನ್’ ನಾಟಕವೂ ಒಂದು ರುದ್ರನಾಟಕವೇ.

'ಪ್ರೊ. ಬಿ.ಎಂ.ಶ್ರೀ.ರವರು', 'ಹೊಂಗನಸು', 'ಇಂಗ್ಲಿಷ್ ಗೀತೆಗಳು' ಎಂಬ ಕವನ ಸಂಕಲನಗಳನ್ನು ರಚಿಸಿದ್ದಾರೆ. ಅವರು ನ್ಯೂಮನ್ ಕವಿ ಬರೆದ 'Lead Kindly Light' ಎಂಬ ಕವಿತೆಯನ್ನು ಕನ್ನಡದಲ್ಲಿ ಅನುವಾದ ಮಾಡಿದ `ಕರುಣಾಳು ಬಾ ಬೆಳಕೆ' ಎಂಬ ಕವನ ತುಂಬಾ ಜನಪ್ರಿಯವಾಯಿತು.

      ಕರುಣಾಳು, ಬಾ, ಬೆಳಕೆ,-                                                 ಮುಸುಕಿದೀ ಮಬ್ಬಿನಲಿ,                                                  ಕೈ ಹಿಡಿದು ನಡೆಸೆನ್ನನು.                                                 ಇರುಳು ಕತ್ತಲೆಯ ಗವಿ; ಮನೆ ದೂರ;                              ಕನಿಕರಿಸಿ;                                                                     ಕೈ ಹಿಡಿದು ನಡೆಸೆನ್ನನು.-                            

ಇತ್ಯಾದಿಅವರು ಬರೆದ ನಾಟಕ- 'ಅಶ್ವತ್ಥಾಮನ್' ಗ್ರೀಕ್` ಕಥೆ ಆಧರಿಸಿದ್ದು. ಪೌರಾಣಿಕವಾಗಿ ಆಶ್ವತ್ಥಾಮ ಒಬ್ಬ ಚಿರಂಜೀವಿ. ಅವನು ಆತ್ಮಹತ್ಯೆ ಮಾಡಿಕೊಂಡನೆಂದು ನಾಟಕವನ್ನು ಮುಕ್ತಾಯಗೊಳಿಸಿದ್ದಕ್ಕಾಗಿ ಸಂಪ್ರದಾಯವಾದಿಗಳು ವಿವಾದವನ್ನೆಬಿಸಿದ್ದರು. .

ಪ್ರಶಸ್ತಿಗಳುಸಂಪಾದಿಸಿ

'ಬಿ.ಎಂ.ಶ್ರೀ'ಯವರಿಗೆ ೧೯೩೮ರಲ್ಲಿ ಅವರ ಅವಿಸ್ಮರಣೀಯ ಕೆಲಸಕ್ಕಾಗಿ ಮೈಸೂರಿನ ಮಹಾರಾಜರು `ರಾಜ ಸೇವಾಸಕ್ತ' ಎಂಬ ಬಿರುದನ್ನು ನೀಡಿ ಗೌರವಿಸಿದರು

. ೧೯೨೮ರಲ್ಲಿ 'ಗುಲಬರ್ಗಾ'ದಲ್ಲಿ ನಡೆದ '೧೪ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ'ರಾಗಿದ್ದರು. ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ ಅದರ ಏಳಿಗೆಗಾಗಿ ಶ್ರಮಿಸಿದರು.

ಹೀಗೆ ತಮ್ಮ ಜೀವಿತ ಕಾಲವನ್ನು ಕನ್ನಡ ಸಾಹಿತ್ಯಕ್ಕಾಗಿ ಮೀಸಲಿಟ್ಟ ಬಿ. ಎಂ. ಶ್ರೀ ಅವರನ್ನು `ಕನ್ನಡದ ಕಣ್ವ' ಎಂದು ಕರೆಯಲಾಗುತ್ತದೆ.

ಕನ್ನಡದ ಕಣ್ವ

ಅವರನ್ನು ಕನ್ನಡ ಜನ ಅಭಿಮಾನದಿಂದ ’ಕನ್ನಡದ ಕಣ್ವ’ ಎಂದು ಕರೆದರು. ಪುರಾಣದ ಕಥೆಯಲ್ಲಿ ಶಕುಂತಳೆ, ವಿಶ್ವಾಮಿತ್ರ-ಮೇನಕೆಯರ ಮಗಳು. ತಂದೆ-ತಾಯಿ ಮಗುವನ್ನು ಕಾಡಿನಲ್ಲಿ ಬಿಟ್ಟು ಹೋದರು. ಆ ಅನಾಥ ಮಗುವನ್ನು ಪ್ರೀತಿಯಿಂದ ಬೆಳೆಸಿದವರು ಮಹರ್ಷಿ ಕಣ್ವರು. ಮಗು ಶಕುಂತಳೆಯಂತೆ ನೋಡಿಕೊಳ್ಳುವವರು ಇಲ್ಲದಿದ್ದಾಗ ಕನ್ನಡವನ್ನು ಬೆಳೆಸಿದವರು ’ಶ್ರೀ’ ಅವರು ಎಂದು ಜನ ಅವರಿಗೆ ಹೀಗೆ ಗೌರವ ತೋರಿಸಿದರು.ಅವರ ಕಾಲದಲ್ಲಿ ಹಿಂದೆ ಕನ್ನಡನಾಡಿನಲ್ಲೂ ಕನ್ನಡವನ್ನು ಕೇಳುವವರಿರಲಿಲ್ಲ. ಕನ್ನಡದಲ್ಲಿ ಎಂ.ಎ. ಮಾಡಲು ತರಗತಿಗಳೇ ಇರಲಿಲ್ಲ. ಕನ್ನಡ ಅಧ್ಯಾಪಕರಿಗೆ ಇಂಗ್ಲಿಷ್ ಅಧ್ಯಾಪಕರಿಗಿಂತ ಕಡಿಮೆ ಸಂಬಳ.

’ಓದುವುದಕ್ಕೆ ಕನ್ನಡದಲ್ಲಿ ಏನಿದೆ?’ ಎಂದೇ ಬಹು ಮಂದಿಯ ಭಾವನೆ. ಕನ್ನಡದಲ್ಲಿ ಬರೆಯುವುದು-ಮಾತನಾಡುವುದು ಹಾಸ್ಯಕ್ಕೆ ವಸ್ತು.

ಇಂತಹ ಕಾಲದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಶ್ರೀಕಂಠಯ್ಯನವರು ನಾಡಿನ ಮೂಲೆ ಮೂಲೆಗಳನ್ನೂ ಸುತ್ತಿದರು. ಕನ್ನಡದಲ್ಲಿ ಭಾಷಣ ಮಾಡಿದರು, ಬರೆದರು. ಹೀಗೆ ಕನ್ನಡ ಅನಾಥವಾಗಿದ್ದಾಗ ಕನ್ನಡಕ್ಕೆ ಪ್ರೋತ್ಸಾಹ ಕೊಟ್ಟು, ಕಣ್ವರು ಅನಾಥ ಶಕುಂತಲೆಯನ್ನು ಬೆಳಸಿದಂತೆ ಅನಾಥ ವಾಗಿದ್ದ ಕನ್ನಡ ಭಾಷೆಯನ್ನು ಬೆಳೆಸಲು ಬಿ.ಎಂ.ಶ್ರೀ, ತಮ್ಮ ಸಂಪೂರ್ಣ ಶಕ್ತಿಯನ್ನು ಧಾರೆಯೆರೆದರು.

-(ಕಣಜ)

ನಿಧನಸಂಪಾದಿಸಿ

೧೯೪೬ರಲ್ಲಿ 'ಪ್ರೊ.ಬಿ.ಎಂ.ಶ್ರೀ'ರವರು, 'ಧಾರವಾಡ'ದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿಯೇ ನಿಧನರಾದರು.

ಹೆಚ್ಚಿನ ಓದು :

ಕನ್ನಡ ಸಾಹಿತ್ಯಕ್ಕೆ ಬಿ.ಎಂ.ಶ್ರೀಯವರ ಕೊಡುಗೆ ಎಷ್ಟು ದೊಡ್ಡದು ಎಂಬ ಬಗ್ಗೆ ತಿಳಿಯಲು 'ಡಾ. ಎ.ಎನ್.ಮೂರ್ತಿರಾಯರ' 'ಸಮಗ್ರ ಲಲಿತ ಪ್ರಬಂಧಗಳು' ಪುಸ್ತಕದಲ್ಲಿ 'ಬಿ.ಎಂ.ಶ್ರೀ ' ಅಧ್ಯಾಯವನ್ನು ಓದಿ.

Last edited ೨ months ago by Mallikarjunasj

RELATED PAGES

ತೀ ನಂ ಶ್ರೀ

ಆಧುನಿಕ ಕನ್ನಡ ಕಾವ್ಯದ ಬೆಳವಣಿಗೆ

ಬಂಗಾಳ ನವೋದಯ

 

                ಇಂತಿ                                                                      ಮಂಜುನಾಥ ಕೆ ಎಂ                                             ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು                              ಬಸವಪಟ್ಟಣ [ಚಿರಡೋಣಿ] 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ