ರಾಘವಾಂಕ
ಪುಟ ಸಮಸ್ಯೆಗಳು
Poems
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.
ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ.
ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ. ಈತನ ಜೀವನ ಹಾಗೂ ಕೃತಿಗಳು ಇವನ ಅನಂತರದ ಕೆಲವು ಕವಿಗಳಿಗೆ ಕುತೂಹಲದ, ಗೌರವದ ವಿಷಯಗಳಾಗಿದ್ದವು.ಇವನ ಜೀವನ ಸಂಗತಿಗಳು ತಕ್ಕಮಟ್ಟಿಗೆ ಚೆನ್ನಬಸವಪುರಾಣದಲ್ಲಿ , ಗುರುರಾಜ ಚಾರಿತ್ರದಲ್ಲಿ , ಭೈರವೇಶ್ವರಕಾವ್ಯ ಕಥಾಮಣಿ ಸೂತ್ರರತ್ನಾಕರದಲ್ಲಿ , ಪದ್ಮರಾಜ ಪುರಾಣದಲ್ಲಿ , ಹರಡಿಕೊಂಡಿವೆ.ಎಲ್ಲಕ್ಕೂ ಮಿಗಿಲಾಗಿ ರಾಘವಾಂಕನ ಕವಿಕಾವ್ಯ ಜೀವನವನ್ನೇ ವಸ್ತುವಾಗಿ ಮಾಡಿಕೊಂಡ ಸಿದ್ದನಂಜೇಶನ ರಾಘವಾಂಕ ಚಾರಿತ್ರ ಒಂದು ವೆಶೇಷ ರೀತಿಯ ಕೃತಿಯಾಗಿದೆ.
ಜೀವನ ಸಂಪಾದಿಸಿ
ರಾಘವಾಂಕ ಹಂಪೆಯಲ್ಲಿ ಹುಟ್ಟಿ ಬೆಳೆದವ. ಇವನ ತಂದೆ ಮಹಾದೇವಭಟ್ಟ ,ತಾಯಿ ರುದ್ರಾಣಿ. ಹರಿಹರ ಇವನ ಸೋದರ ಮಾವ ಮತ್ತು ಗುರು. ಆತ ದೀಕ್ಷಾಗುರು, ಕಾವ್ಯಗುರುವೂ ಹೌದು. ಹರಿಹರನಂತೆ ರಾಘವಾಂಕನೂ ಪಂಪಾ ವಿರೂಪಾಕ್ಷನ ಪರಮಭಕ್ತ. ಹಂಪೆಯ ಶಂಕರಪ್ರಭು , ಹಂಪೆಯ ಮಾದಿರಾಜ, ಹಂಪೆಯ ಹರೀಶ್ವರ ಇದು ರಾಘವಾಂಕನ ಗುರುಪರಂಪರೆ.ತಾನು ಹರಿಹರನ ವರಸುತ ಎಂದು ಈತ ಹೇಳಿಕೊಂಡಿದ್ದಾನೆ.ಈತ ಸಂಸ್ಕೃತ ಭಾಷೆಗಳಲ್ಲಿಯೂ ಸಮಸ್ತ ಲೌಕಿಕ ವೈದಿಕ ವಿದ್ಯೆಗಳಲ್ಲಿಯೂ ಪರಿಣಿತನಾಗಿದ್ದ . 'ಉಭಯಕವಿ ಕಮಲರವಿ'ಯಾದ ಈತ ಹರಿಶ್ಚಂದ್ರಕಾವ್ಯವನ್ನು ರಚಿಸಿ ಪಂಪಾಪುರದ ದೇವರಾಜನ ಸಭೆಯಲ್ಲಿ ಓದಿ ವಿದ್ವಾಂಸರನ್ನೊ ರಾಜನನ್ನೂ ಮೆಚ್ಚಿಸಿದ್ದ್ದ.. ರಾಜ ಇವನಿಗೆ 'ಕವಿಶರಭಭೇರುಂಡ' ಎಂಬ ವಾದದ ಪೆಂಡೆಯವನ್ನು ಕೊಟ್ಟು ಸನ್ಮಾನಿಸಿದ. ರಾಜಸಭೆಯಲ್ಲಿ ಹೀಗೆ ಮೆಚ್ಚುಗೊಂಡ ಹರಿಶ್ಚಂದ್ರಕಾವ್ಯವನ್ನು ರಾಘವಾಂಕ ಹೊನ್ನ ಹರಿವಾಣದಲ್ಲಿರಿಸಿ ತಂದು ತನ್ನ ಗುರುವು ಮಾವನೂ ಆದ ಹರಿಹರನ ಮುಂದಿರಿಸಿ ಅವನ ಆಶೀರ್ವಾದಗಳನ್ನು ಬೇಡಿದಾಗ , ಆತ ಮೆಚ್ಚಲೊಲ್ಲದೆ , ನರಸ್ತುತಿ ಮಾಡಿದ ತಪ್ಪಿಗಾಗಿ ರಾಘವಾಂಕನ ಹಲ್ಲುಗಳನ್ನು ಮುರಿದ. ಅನಂತರ ಶೈವಕೃತಿಪಂಚಕಗಳನ್ನು ರಚಿಸಿ ಮರಳಿ ತನ್ನ ಹಲ್ಲುಗಳನ್ನು ಪಡೆದ. ಒಮ್ಮೆ ಓರಂಗಲ್ಲಿನ ಪ್ರತಾಪರುದ್ರದೇವನ ಸಭೆಯಲ್ಲಿ ಏಕದ್ವಿತ್ರಿಸಂಧಿಗ್ರಾಹಿಗಳೆಂಬ ಕುಕವಿಗಳನ್ನು ತನ್ನ ಮೀಸಲು ಕವಿತೆಯಾದ ವೀರೇಶ ಚರಿತ್ರೆಯನ್ನು ಓದುವುದರ ಮೂಲಕ ಭಂಗಿಸಿ ಪ್ರತಾಪರುದ್ರನಿಂದ ಉಭಯಕವಿ ಶರಭಭೇರುಂಡ ಎಂಬ ಹೆಸರು ಪಡೆದ.ಅನಂತರ ಹಂಪೆಗೆ ಬಂದು ಹರಿಹರನ ಆಜ್ಞಾನುಸಾರವಾಗಿ ಬೇಲೂರಿಗೆ ಹೋಗಿ ಅಲ್ಲಿ ಬಯಲಾದ.
ಇದರಲ್ಲಿ ಐತಿಹಾಸಿಕತೆ ಹಾಗು ಸಾಂಕೇತಿಕತೆಗಳೆರಡೂ ಬೆರೆತಿವೆ. ರಾಘವಾಂಕ ಹರಿಹರನ ವರಸುತನೆಂಬ ಹೆಮ್ಮೆಯ ಶಿಷ್ಯ . ಉಭಯ ಭಾಷಾಪಂಡಿತ ತನ್ನ ಪ್ರತಿವಾದಿಗಳೊಂದಿಗೆ ಸೆಣಸಿ ಬದುಕುವ ಛಲ ಉಳ್ಳವ ಎನ್ನುವ ಅಂಶಗಳು ಹೆಚ್ಚು ವಾಸ್ತವಸಮೀಪವಾದವು. ರಾಘವಾಂಕನ ಹಲ್ಲುಗಳನ್ನು ಹರಿಹರ ಮುರಿದದ್ದು ಅನಂತರ ರಾಘವಾಂಕನು ಶೈವಕೃತಿ ಪಂಚಕಗಳನ್ನು ಬರೆದು ಹಲ್ಲುಗಳನ್ನು ಪಡೆದದ್ದು ಈ ದಂತಕತೆ ವಸ್ತು ರೀತಿಗಳೆರಡರಲ್ಲೂ ಹರಿಹರನ ಪರಂಪರೆಗೆ ವಿರೋಧವಾಗಿ ನಡೆದುಕೊಂಡ ರಾಘವಾಂಕನ ಬಗೆಗೆ ಹರಿಹರ ಪರಂಪರೆ ತೋರಿಸಿದ ಪ್ರತಿಕ್ರಿಯೆಯನ್ನೂ ಅನಂತರ ರಾಘವಾಂಕ ಹರಿಹರ ಪರಂಪರೆಯೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಸಾಂಕೇತಿಸುತ್ತದೆ ಎನ್ನಬಹುದು.
ಕೃತಿಗಳು ಸಂಪಾದಿಸಿ
ರಾಘವಾಂಕನ ಕಾವ್ಯಗಳು ಆರು.
೧.ಹರಿಶ್ಚಂದ್ರ ಕಾವ್ಯ.
೨.ಸಿದ್ಧರಾಮ ಪುರಾಣ
೩.ಸೋಮನಾಥ ಚರಿತೆ
೪. ವೀರೇಶ ಚರಿತೆ
೫.ಶರಭ ಚಾರಿತ್ರ
೬.ಹರಿಹರ ಮಹತ್ವ - ಈ ಕೃತಿ ಇನ್ನೂ ಸಿಕ್ಕಿಲ್ಲ. ಇವಗಳಲ್ಲಿ ಮೊದಲ ನಾಲ್ಕು ದೊರೆತು ಪ್ರಕಟವಾಗಿದೆ.ಶರಭ ಚಾರಿತ್ರ ಹಾಗೂ ಹರಿಹರ ಮಹತ್ವ ಇನ್ನೂ ದೊರೆತಿಲ್ಲ.ಇದೂ ಅಲ್ಲದೆ "ದೇವಾಂಗ ದಾರಿಮಯ್ಯನ ಪುರಾಣ"ಎಂಬ ಸಾಂಗತ್ಯ ಗ್ರಂಥವೊಂದು ದೊರಕಿದ್ದು , ರಾಘವಾಂಕನ ಅಂಕಿತದಲ್ಲಿದೆ. ಇದನ್ನು ರಾಘವಾಂಕ ಬರೆದನೇ ಇಲ್ಲವೆ ಎನ್ನುವ ಬಗ್ಗೆ ಖಚಿತವಾಗಿ ತಿಳಿಯಬೇಕಾಗಿದೆ.
ವಿಮರ್ಶೆ ಸಂಪಾದಿಸಿ
ಕನ್ನಡ ಸಾಹಿತ್ಯದಲ್ಲಿ ರಾಘವಾಂಕ ಪ್ರಧಾನವಾಗಿ ಪ್ರಯೋಗಶೀಲನಾದ ಸ್ವತಂತ್ರ ಮನೋಧರ್ಮದ ಕವಿ.' ಜನ ಬದುಕಬೇಕೆಂದು ಕಾವ್ಯಮುಖದಿಂಪೇಳ್ದನನಪೇಕ್ಶೆಯಿಂದ' ಎಂಬುದು ಇವನ ಕಾವ್ಯೋದ್ದೇಶವಾಗಿತ್ತು. ಮಹಾಕವಿ ಹರಿಹರನ ಸಮಕಾಲೀನನೂ , ವರಸುತನೂ ಆದ ಈತ ಹರಿಹರನ ಪ್ರಭಾವದ ಸೆಳೆತಕ್ಕೆ ಪ್ರತಿಯಾಗಿ ನಿಂತು ತನ್ನದೇ ಆದೊಂದು ಪರಂಪರೆಯನ್ನು ನಿರ್ಮಿಸಿಕೊಂಡವ.ತನಗೆ ಹಿನ್ನೆಲೆಯಲ್ಲಿದ್ದ ಹರಿಹರನ ರಗಳೆಯ ರೀತಿಯನ್ನು ಅನುಸರಿಸದೆ ಮೊತ್ತಮೊದಲಿಗೆ ಷಟ್ಪದಿ ರೂಪವನ್ನು ಪಳಗಿಸಿ ದೀರ್ಘ ಕಥಾನಿರೂಪಣೆಗೆ ಸೊಗಸಾಗಿ ಅಳವಡಿಸಿಕೊಂಡದ್ದು ಇವನ ಮಹತ್ವದ ಸಾಧನೆ.ಕನ್ನಡ ಸಾಹಿತ್ಯದಲ್ಲಿ ಕವಿ ರನ್ನನನ್ನು ಬಿಟ್ಟರೆ ಅಷ್ಟೇ ನಾಟ್ಯ ಪ್ರತಿಭೆಯನ್ನು ಪ್ರಕಟಿಸಿದ ಮತೊಬ್ಬ ಕವಿ ರಾಘವಾಂಕ.
ಹರಿಶ್ಚಂದ್ರಕಾವ್ಯ
ಹರಿಶ್ಚಂದ್ರಕಾವ್ಯ ರಾಘವಾಂಕನ ಕೃತಿಗಳಲ್ಲಿಯೇ ಶ್ರೇಷ್ಥವಾದುದು ಮಾತ್ರವಲ್ಲ . ಕನ್ನಡ ಸಾಹಿತ್ಯದಲ್ಲಿಯೇ ಅಪೂರ್ವವಾದ ಕೃತಿ.ರಾಘವಾಂಕನಿಗಿಂತ ಹಿಂದಿನ ಎಲ್ಲ ಆಕಾರಗಳೊಡನೆ ಇದರ ಸಂವಿಧಾನವನ್ನು ಹೋಲಿಸಿದರೆ ಭಾರತೀಯ ಸಾಹಿತ್ಯದಲ್ಲಿಯೇ ಕಾಣದೊರೆಯುವ ನೂತನ ಸನ್ನಿವೇಶಸೃಷ್ಟಿ , ಕೃತಿಬಂಧೆ ಇಲ್ಲಿದೆ ಎಂಬುದು ಹೆಮ್ಮೆಯ ಸಂಗತಿ ಎಂದು ವಿದ್ವಾಂಸರು ಈ ಕಾವ್ಯದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 'ಹರನೆಂಬುದೇ ಸತ್ಯ ಸತ್ಯವೆಂಬುದೇ ಹರನು' ಎನ್ನುವ ತತ್ವವನ್ನು ಜೀವನಕ್ಕೆ ಅಳವಡಿಸಿ ಬದುಕಿದ ಸತ್ಯಸಾಧಕ ಹರಿಶ್ಚಂದ್ರನ ಕರುಣಾದ್ಭುತವಾದ ಕಥೆಯೇ ಹರಿಶ್ಚಂದ್ರಕಾವ್ಯ.. ಇದರಲ್ಲಿ ಹದಿನಾಲ್ಕು ಸ್ಥಳಗಳಿದ್ದು ವಾರ್ಧಕ ಷಟ್ಪದಿಯಲ್ಲಿ ರಚಿತವಾಗಿದೆ.ಹರಿಶ್ಚಂದ್ರನ ಪಾತ್ರ ಸತ್ಯ ಸಾಕ್ಷಾತ್ಕಾರಕ್ಕಾಗಿ ನಿರಂತರವೂ ಹೂರಾಡುವ ಆದರ್ಶಾಭೀಪ್ಸೆಯ ಪ್ರತಿಮೆಯಾಗಿದೆ. ಈ ಕೃತಿಯಲ್ಲಿ ಕಂಡುಬರುವ ಶೈಲಿಹದ , ನಾಟ್ಯಮಯವಾದ ಸನ್ನಿವೇಶಗಳು , ಪಾತ್ರಗಳಲ್ಲಿ ಕಂಡುಬರುವ ವೈವಿಧ್ಯ , ಇವೆ
ಇಂತಿ
ಮಂಜುನಾಥ ಕೆ ಎಂ
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಬಸವಪಟ್ಟಣ [ಚಿರಡೋಣಿ]
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ