ದಿನಾಂಕ 17/6/2018
ಶಿವಕೋಟ್ಯಾಚಾರ್ಯ
ಶಿವಕೋಟ್ಯಾಚಾರ್ಯ
ಪಂಪಯುಗದಲ್ಲಿ ರಚಿತವಾದ ಒಂದೇ ಒಂದು ಗದ್ಯ ಗ್ರಂಥವೆಂದರೆ ''ವಡ್ಡಾರಾಧನೆ''. ಇದನ್ನು ರಚಿಸಿದವರು ಶಿವಕೋಟ್ಯಾಚಾರ್ಯ. ಇವರು ಸುಮಾರು ಕ್ರಿ.ಶ.೯೨೦ ರ ಸನಿಹದಲ್ಲಿದೆ. ಶ್ರೇಷ್ಠ ಜೈನ ಕವಿಯಾದ ಶಿವಕೋಟ್ಯಾಚಾರ್ಯರು ಹಳೆಗನ್ನಡದಲ್ಲಿ ಸುಂದರವಾದ ಗದ್ಯಕಾವ್ಯವನ್ನು ರಚಿಸಿದರು. ಈ ಕಥಾ ಗ್ರಂಥದಲ್ಲಿ ೧೯ ಮಹಾತ್ಮರ ಜೀವನ ಕಥೆಗಳಿವೆ. ಕಥಾಕೋಶವೆಂದೇ ಈ ಗ್ರಂಥ ಪ್ರಸಿದ್ದವಾಗಿದೆ. ಈ ಕಾವ್ಯವು ೯ ನೇ ಶತಮಾನದ ನಂತರದಲ್ಲಿಯೇ ರಚಿತವಾಗಿರಬೇಕೆಂದು ವಿಮರ್ಶಕರು ತಿಳಿದಿದ್ದಾರೆ. ವಡ್ಡಾರಾಧನೆ ಎಂದರೆ ವೃದ್ದರ, ಜ್ಞಾನಿಗಳ, ಜೈನ ಯತಿಗಳ ಜೀವನ ಸಾಧನೆಗಳಿಗೆ ಕೊಡುವ ಗೌರವವಾಗಿರುವದು. ಈ ವಡ್ಡಾರಾಧನೆಯ ಕಥೆಗಳಲ್ಲಿ ಜೀವ ತುಂಬಿದ ಶಿವಕೋಟ್ಯಾಚಾರ್ಯ ಬೇರೆ ಬೇರೆ ರೀತಿಯಿಂದ ಕಥೆಯನ್ನು ಹೇಳಿದ್ದಾರೆ. ನೀತಿ, ಚರಿತ್ರೆ, ಧರ್ಮ, ವ್ಯವಹಾರ ಹೀಗೆ ಹಲವು ವಿಷಯಗಳು ಈ ಕಥೆಗಳಲ್ಲಿವೆ. ಧಾರ್ಮಿಕ ಉದ್ದೇಶದಿಂದ ರಚಿತವಾದ ಈ ಕೃತಿ ಹಳೆಗನ್ನಡದ ಒಂದು ಉತ್ತಮ ಕೃತಿಯಾಗಿರುವುದು. ಇದು ಒಂದು ಅದ್ಭುತ ಗದ್ಯ ಕಾವ್ಯ.
‘ವಡ್ಡಾರಾಧನೆ’ಯಲ್ಲಿ ೧೯ ಕಥೆಗಳಿವೆ. (.Pdf ನಂತೆ download ಮಾಡಲು ಕಥೆಯ ಮೇಲೆ ಕ್ಲಿಕ್ ಮಾಡಿ)
ಇಂತಿ
ಮಂಜುನಾಥ ಕೆ ಎಂ
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಬಸವಪಟ್ಟಣ [ಚಿರಡೋಣಿ]
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ